Live Stream

[ytplayer id=’22727′]

| Latest Version 8.0.1 |

Local News

ಕೃಷಿ ಹೊಂಡದಲ್ಲಿ ಮುಳುಗಿ, ಇಂಗಳಿ ಗ್ರಾಮದ ಮೂರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ, ಇಂಗಳಿ ಗ್ರಾಮದ ಮೂರು ಮಕ್ಕಳ ದಾರುಣ ಸಾವು

ಚಿಕ್ಕೋಡಿ: ತಾಲೂಕಿನ ಇಂಗಳಿ ಗ್ರಾಮದ ತೋಟದ ಕೃಷಿ ಹೊಂಡದಲ್ಲಿ ಶುಕ್ರವಾರ ಸಂಜೆ ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ಹೋದ ಮೂವರು ಬಾಲಕರು ಮುಳುಗಿ ಮೃತಪಟ್ಟ ಘಟ‌ನೆ ನಡೆದಿದೆ.

ಇಂಗಳಿ ಗ್ರಾಮದ ಪೃಥ್ವಿರಾಜ್‌ ಕೆರಬಾ( 13), ಅಥರ್ವ ಸೌಂದಲಗೆ (15), ಸಮರ್ಥ ಗಡಕರಿ (13) ಮೃತ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳಿಗೂ ಈಜು ಬರುತ್ತಿರಲಿಲ್ಲ. ಮೂವರು ಸೇರಿ ಈಜು ಕಲಿಯಲು ಮನೆಯಿಂದ ಸೈಕಲ್ ತೆಗೆದುಕೊಂಡು ಊರ ಹೊರಗಿರುವ ಕೃಷಿ ಹೊಂಡಕ್ಕೆ ಹೋಗಿದ್ದಾರೆ. ಈಜು ಬರದೆ ಇದ್ದ ಕಾರಣಕ್ಕೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಎಂದಿನಂತೆ ಹೊಲದ ಮಾಲೀಕ ಸುತ್ತಾಡುತ್ತಿದ್ದಾಗ ಹೊಂಡದ ಪಕ್ಕದಲ್ಲಿ ಸೈಕಲ್ ಇದ್ದುದನ್ನು ಕಂಡು ಹೊಂಡ ಇಣುಕಿದಾಗ ಮೂವರು ಬಾಲಕರ ಶವ ಪತ್ತೆಯಾಗಿವೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";