ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ ಗ್ರಾಮದ ಮಹಿಳೆಯ ಭೀಕರ ಕೊಲೆಯಾಗಿದ್ದು, ಇದು ಕೊಲೆಯಲ್ಲ ಬೈಕ್ ಅಪಘಾತವೆಂದು ಬಿಂಬಿಸಿಸಲು ಯತ್ನಿಸಿದ ಹಂತಕರನ್ನ ಪೊಲೀಸರು ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ.
ರೇಣುಕಾ ಸಂತೋಷ ಹೋನಕಾಂಡೆ (27) ಮೃತ ಮಹಿಳೆಯಾಗಿದ್ದು, ನಿನ್ನೆ ತಡ ರಾತ್ರಿ 9:00 ಗಂಟೆ ಸುಮಾರಿಗೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಅಥಣಿಯಿಂದ ಬೈಕ್ ಮೇಲೆ ಹೊರಟಾಗ ಬೈಕ್ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಹೊರಟ ಹಂತಕರನ್ನ ಸಂಶಯಾಸ್ಪದವಾಗಿ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಶುರು ಮಾಡಿ ಇದು ಅಪಘಾತವಲ್ಲ ಕೊಲೆ ಎಂದು ಹೇಳಲಾಗಿದೆ.