Live Stream

[ytplayer id=’22727′]

| Latest Version 8.0.1 |

National NewsState News

ಕೊಲ್ಹಾಪುರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳಗಾವಿ ಹುಡುಗನ ಸಾಧನೆ

ಕೊಲ್ಹಾಪುರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳಗಾವಿ ಹುಡುಗನ ಸಾಧನೆ

 

ಬೆಳಗಾವಿ: ಶ್ರೀನಗರದ ಆನಂದ ಅಕಾಡೆಮಿಯ ವಿದ್ಯಾರ್ಥಿ ಪ್ರೀತಮ್ ವಿಜಯ ಕೋಟಿ ಇತ್ತೀಚೆಗೆ ಕೊಲ್ಹಾಪುರ, ಮಹಾರಾಷ್ಟ್ರದಲ್ಲಿ ನಡೆದ 13ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ 2025ರಲ್ಲಿ ಅದ್ಭುತ ಸಾಧನೆ ಮಾಡಿ ಬೆಳಗಾವಿಗೆ ಕೀರ್ತಿ ತಂದಿದ್ದಾನೆ.

ಪ್ರೀತಮ್, ಫೈಟ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕಟಾಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ತನ್ನ ಪ್ರತಿಭೆಯನ್ನು ಸಾಬೀತುಪಡಿಸಿದ್ದಾನೆ. ನೂರಾರು ಸ್ಪರ್ಧಿಗಳ ನಡುವೆಯೂ ತಾನೆ ಬೇರೆ ಎಂಬುದನ್ನು ತೋರಿಸಿಕೊಂಡ ಈ ಜಯ, ಅವನ ಪರಿಶ್ರಮ ಮತ್ತು ಸಮರ್ಪಣೆಯ ಪ್ರತೀಕವಾಗಿದೆ.

ಈ ಸಾಧನೆಗೆ ಪ್ರೀತಮ್‌ನ ಕರಾಟೆ ಗುರು ಆನಂದ ಹಿರೇಮಠ ಹಾಗೂ ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದ್ದಾರೆ. “ಪ್ರೀತಮ್‌ ಮುಂದಿನ ದಿನಗಳಲ್ಲಿ ಇನ್ನೂ ಎತ್ತರದ ಮಟ್ಟದಲ್ಲಿ ಸಾಧನೆ ಮಾಡಲಿ” ಎಂದು ಅವರು ಹಾರೈಸಿದ್ದಾರೆ.

ಕೊಲ್ಹಾಪುರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ರಾಷ್ಟ್ರದ ವಿವಿಧ ರಾಜ್ಯಗಳ ಪ್ರತಿಭಾವಂತರ ನಡುವೆ ತೀವ್ರ ಪೈಪೋಟಿಯಲ್ಲಿ ಪ್ರೀತಮ್ ಪಡೆದ ಜಯ, ಬೆಳಗಾವಿಗೆ ಹೆಮ್ಮೆಯನ್ನು ತಂದಿದೆ.

ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";