Live Stream

[ytplayer id=’22727′]

| Latest Version 8.0.1 |

Local News

ಸೇವಾಭಾವನೆಯ ಕೊಡುಗೆಗೆ ಗೌರವ – ಮೈಸೂರಿನ ಗೋವಿತ್ ಕಿರಣ್‌ಗೆ ‘ಸೇವಾ ಭೂಷಣ’ ಪ್ರಶಸ್ತಿ ಪ್ರದಾನ

ಸೇವಾಭಾವನೆಯ ಕೊಡುಗೆಗೆ ಗೌರವ – ಮೈಸೂರಿನ ಗೋವಿತ್ ಕಿರಣ್‌ಗೆ ‘ಸೇವಾ ಭೂಷಣ’ ಪ್ರಶಸ್ತಿ ಪ್ರದಾನ

ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ಯುವ ವೇದಿಕೆಯ 14ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸಮಾಜ ಸೇವೆಯಲ್ಲಿ ಮಾಡಿದ ಮಹತ್ತರ ಸೇವೆಯನ್ನು ಗುರುತಿಸಿ ಮೈಸೂರಿನ ಶ್ರೀ ಗೋವಿತ್ ಕಿರಣ್ ಅವರಿಗೆ ಪ್ರತಿಷ್ಠಿತ ‘ಸೇವಾ ಭೂಷಣ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಮಾರಂಭವು ಮೈಸೂರಿನ ಕಿರುರಂಗ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು. ಪ್ರಶಸ್ತಿಯನ್ನು ಕುಣಿಗಲ್ ಅರೆಶಂಕರ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಶ್ರೀ ಸಿದ್ದರಾಮ ಚೈತನ್ಯ ಸ್ವಾಮೀಜಿ, ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಅಧ್ಯಕ್ಷೆ ಡಾ. ಎಚ್.ಎಲ್. ಯಮುನಾ, ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಮಂಡ್ಯ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್ ಅವರ ಸಮ್ಮುಖದಲ್ಲಿ ನೀಡಿ ಗೌರವಿಸಲಾಯಿತು.

ಸಮಾಜ ಸೇವೆಯ ಪರಿಪಾಠ: ಗೋವಿತ್ ಕಿರಣ್ ಅವರು ಕಳೆದ ಕೆಲವು ವರ್ಷಗಳಿಂದ ಶಿಕ್ಷಣ ಮತ್ತು ಮಾನವ ಸೇವೆಯ ಕ್ಷೇತ್ರದಲ್ಲಿ ಅಮೂಲ್ಯ ಕೊಡುಗೆ ನೀಡುತ್ತಾ ಬಂದಿದ್ದಾರೆ. ಅವರು ಸರ್ಕಾರಿ ಶಾಲೆಗಳ ಮಕ್ಕಳಿಗೆ ಅಗತ್ಯವಿರುವ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುತ್ತಿದ್ದಾರೆ. ಅಂಧ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳಿಗೆ 100ಕ್ಕೂ ಹೆಚ್ಚು ಪರೀಕ್ಷೆಗಳಲ್ಲಿ ಸಹಾಯಕ ಬರಹಗಾರರಾಗಿ ಕಾರ್ಯನಿರ್ವಹಿಸಿದ್ದು, ಅವರ ಭವಿಷ್ಯ ಕಟ್ಟುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ.

ಇದಲ್ಲದೆ, ಅವರು ಶಾಲಾ ಮಕ್ಕಳಿಗಾಗಿ ಜೀವನ ಕೌಶಲ್ಯ ತರಬೇತಿ, ಮೌಲ್ಯ ಶಿಕ್ಷಣ ಶಿಬಿರಗಳು, ಮತ್ತು ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ, ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆ ಮತ್ತು ಪ್ರಬುದ್ಧತೆಯನ್ನು ಬೆಳೆಸುತ್ತಿದ್ದಾರೆ.

ಈ ಪ್ರಶಸ್ತಿ ನೀಡುವುದರ ಮೂಲಕ ಅವರ ಸೇವಾಭಾವನೆಗೆ ಸಾಮಾಜಿಕ ಮಾನ್ಯತೆ ದೊರೆತಿದ್ದು, ಇಂತಹ ವ್ಯಕ್ತಿತ್ವಗಳು ಇಂದಿನ ಸಮಾಜಕ್ಕೆ ಸ್ಪೂರ್ತಿಯ ಪ್ರತೀಕಗಳಾಗಿದ್ದಾರೆ.

ಸೇವೆಯಲ್ಲಿ ಶ್ರದ್ಧೆಯಿರಲಿ, ಸಮಾಜಕ್ಕೆ ಬೆಳಕಾಗಲಿ – ಇದೇ ಅವರ ಸಂದೇಶ.

ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";