Live Stream

[ytplayer id=’22727′]

| Latest Version 8.0.1 |

Local News

ವೈ.ಬಿ. ಕಡಕೋಳ ಅವರಿಗೆ ಗೌರವ ಡಾಕ್ಟರೇಟ್ ಪ್ರಾಪ್ತಿ

ವೈ.ಬಿ. ಕಡಕೋಳ ಅವರಿಗೆ ಗೌರವ ಡಾಕ್ಟರೇಟ್ ಪ್ರಾಪ್ತಿ

ಸವದತ್ತಿ: ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ವೈ.ಬಿ. ಕಡಕೋಳ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಡಾ. ಮಹೇಶ ಗಾಜಪ್ಪನವರ ಅವರ ಮಾರ್ಗದರ್ಶನದಲ್ಲಿ “ತಲ್ಲೂರು ರಾಯನಗೌಡರು – ಸಮಗ್ರ ಅಧ್ಯಯನ” ವಿಷಯದ ಮೇಲೆ ಮಂಡಿಸಿದ ಪ್ರಬಂಧಕ್ಕೆ ಈ ಗೌರವ ಲಭಿಸಿದೆ.

ಶಿಕ್ಷಕ ಹಾಗೂ ಸಾಹಿತಿಗಳಾದ ಕಡಕೋಳ ಅವರು ಈಗಾಗಲೇ 40ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದು, ಅವರು ಬಾಳಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ “ಮುನವಳ್ಳಿ – ಒಂದು ಸಾಂಸ್ಕೃತಿಕ ಅಧ್ಯಯನ” ವಿಷಯದಲ್ಲಿ ಎಂ.ಫಿಲ್ ಪದವಿಯೂ ಪಡೆದಿರುವುದು ವಿಶೇಷ.

ಈ ಸಾಧನೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಂಗಲಾ ಮೆಟಗುಡ್ ಹಾಗೂ ಪ್ರಧಾನ ಕಾರ್ಯದರ್ಶಿ ಎಂ. ವೈ. ಮೆಣಸಿನಕಾಯಿ ಅವರು ವೈ.ಬಿ. ಕಡಕೋಳ ಅವರಿಗೆ ಪರಿಷತ್ತಿನ ವತಿಯಿಂದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";