Live Stream

[ytplayer id=’22727′]

| Latest Version 8.0.1 |

Local NewsState News

ದುಡ್ಡು ಕೊಡದಿದ್ದರೆ ನಿಮ್ಮ ಸೆ*** ವಿಡಿಯೋ ಇದೆ: ಆನಂದ ಗುರೂಜಿ ಕಾರು ಅಡ್ಡಗಟ್ಟಿ ಹಣಕ್ಕಾಗಿ ಬ್ಲ್ಯಾಕ್ ಮೇಲ್; ಪ್ರಕರಣ ದಾಖಲು!

ದುಡ್ಡು ಕೊಡದಿದ್ದರೆ ನಿಮ್ಮ ಸೆ*** ವಿಡಿಯೋ ಇದೆ: ಆನಂದ ಗುರೂಜಿ ಕಾರು ಅಡ್ಡಗಟ್ಟಿ ಹಣಕ್ಕಾಗಿ ಬ್ಲ್ಯಾಕ್ ಮೇಲ್; ಪ್ರಕರಣ ದಾಖಲು!

ಬೆಂಗಳೂರು: ಪ್ರಖ್ಯಾತ ಜ್ಯೋತಿಷಿ ಆನಂದ ಗುರೂಜಿಯ ಕಾರು ಅಡ್ಡಿಗಟ್ಟಿ ಹಣಕ್ಕೆ ಅಶ್ಲೀಲ ವಿಡಿಯೋ ಅಂತರ್ಜಾಲದಲ್ಲಿ ಹರಿ ಬಿಡುವುದಾಗಿ, ಬ್ಲ್ಯಾಕ್​ಮೇಲ್ ಹಾಗೂ ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಆನಂದ ಗುರೂಜಿ ಅವರು ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದು, ಈ ದೂರಿನ ಸಂಬಂಧ ಪೊಲೀಸರು, ಕೃಷ್ಣಮೂರ್ತಿ(ಎ1) ಹಾಗೂ ದಿವ್ಯಾ ವಸಂತ (ಎ2) ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆನಂದ ಗುರೂಜಿ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣ ಸಂಬಂಧ ಕೋರ್ಟ್​ನಿಂದ ತಡೆಯಾಜ್ಞೆ ತರಲಾಗಿದೆ. ಆದರೂ ಸಹ ಈ ಪ್ರಕರಣ ಸಂಬಂಧ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ.

ವಿಡಿಯೋ ಇದೆ ಎಂದು ಪ್ರಖ್ಯಾತ ಆನಂದ್ ಗುರೂಜಿಗೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ. ಕೋರ್ಟ್​ನಿಂದ ತಡೆಯಾಜ್ಞೆ ತಂದರೂ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";