ಬೆಂಗಳೂರು: ಪ್ರಖ್ಯಾತ ಜ್ಯೋತಿಷಿ ಆನಂದ ಗುರೂಜಿಯ ಕಾರು ಅಡ್ಡಿಗಟ್ಟಿ ಹಣಕ್ಕೆ ಅಶ್ಲೀಲ ವಿಡಿಯೋ ಅಂತರ್ಜಾಲದಲ್ಲಿ ಹರಿ ಬಿಡುವುದಾಗಿ, ಬ್ಲ್ಯಾಕ್ಮೇಲ್ ಹಾಗೂ ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಆನಂದ ಗುರೂಜಿ ಅವರು ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದು, ಈ ದೂರಿನ ಸಂಬಂಧ ಪೊಲೀಸರು, ಕೃಷ್ಣಮೂರ್ತಿ(ಎ1) ಹಾಗೂ ದಿವ್ಯಾ ವಸಂತ (ಎ2) ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಆನಂದ ಗುರೂಜಿ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣ ಸಂಬಂಧ ಕೋರ್ಟ್ನಿಂದ ತಡೆಯಾಜ್ಞೆ ತರಲಾಗಿದೆ. ಆದರೂ ಸಹ ಈ ಪ್ರಕರಣ ಸಂಬಂಧ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ.
ವಿಡಿಯೋ ಇದೆ ಎಂದು ಪ್ರಖ್ಯಾತ ಆನಂದ್ ಗುರೂಜಿಗೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಕೋರ್ಟ್ನಿಂದ ತಡೆಯಾಜ್ಞೆ ತಂದರೂ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.